SHIVAMOGGA LIVE NEWS | SHIMOGA | 8 ಜುಲೈ 2022
ದಾರಿ ಕೇಳುವ ನೆಪದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ನಂದಿನಿ ಹಾಲಿನ ಬೂತ್’ನ ಮಾಲೀಕರೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಒಡ್ಡಿ, ಮೊಬೈಲ್, ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ.
ಮೋಹನ್ ಕುಮಾರ್ ಎಂಬುವವರು ಮೊಬೈಲ್, ಹಣ ಕಳೆದುಕೊಂಡಿದ್ದಾರೆ. ಇವರು ಕುವೆಂಪು ರಸ್ತೆಯಲ್ಲಿ ನಂದಿನಿ ಹಾಲಿನ ಬೂತ್ ನಡೆಸುತ್ತಿದ್ದಾರೆ.
ಜುಲೈ 6ರಂದು ಬೆಳಗಿನ ಜಾವ 4.30ರ ಹೊತ್ತಿಗೆ ಮೋಹನ್ ಕುಮಾರ್ ಅವರ ನಂದಿನಿ ಹಾಲಿನ ಬೂತ್ ಬಳಿ ಇಬ್ಬರು ಯುವಕರು ಬೈಕಿನಲ್ಲಿ ಬಂದಿದ್ದಾರೆ. ಗೋಪಾಳಕ್ಕೆ ಹೋಗುವ ದಾರಿ ಕೇಳಿದ್ದಾರೆ. ಮೋಹನ್ ಕುಮಾರ್ ಅವರು ದಾರಿ ಹೇಳಿದ್ದಾರೆ.
ಚಾಕು ತೋರಿಸಿದ ದುಷ್ಕರ್ಮಿಗಳು
ದಾರಿ ಕೇಳುತ್ತಿದ್ದಂತೆ ಬೈಕಿನಲ್ಲಿದ್ದ ದುಷ್ಕರ್ಮಿಗಳು, ಚಾಕು ತೆಗೆದು ತೋರಿಸಿದ್ದಾರೆ. ಮೋಹನ್ ಕುಮಾರ್ ಅವರಿಗೆ ಬೆದರಿಕೆ ಒಡ್ಡಿ, ಮೊಬೈಲ್ ಕಸಿದುಕೊಂಡಿದ್ದಾರೆ. ಜೇಬಿನಲ್ಲಿದ್ದ ಹಣವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಉರ್ದು ಭಾಷೆಯಲ್ಲಿ ಮಾತನಾಡುತ್ತಿದ್ದರು ಎಂದು ಮೋಹನ್ ಕುಮಾರ್ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಎಂಟು ಸಾವಿರ ರೂ. ಬೆಲೆ ಬಾಳುವ ಸ್ಯಾಮ್ ಸಂಗ್ ಮೊಬೈಲ್, 4 ಸಾವಿರ ರೂ. ನಗದು ಕಸಿದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಬಳಿ ಯುವಕ ಅರೆಸ್ಟ್, ಕಾರಣವೇನು?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.