ಶಿವಮೊಗ್ಗ ಲೈವ್.ಕಾಂ | SHIMOGA NEWS | 06 FEBRUARY 2021
ಕಲ್ಲಗಂಗೂರು ಸ್ಪೋಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು ಕ್ರಷರ್ ಜಾಗದ ಮಲೀಕರನ್ನು ಬಂಧಿಸಲಾಗಿದೆ. ಜಾಗದ ಮಾಲೀಕ ಮತ್ತು ಆತನ ಪುತ್ರನನ್ನು ಶಿವಮೊಗ್ಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಶಂಕರಗೌಡ ಕುಲಕರ್ಣಿ (76) ಮತ್ತು ಆತನ ಪುತ್ರ ಅವಿನಾಶ್ ಕುಲಕರ್ಣಿ (43) ಬಂಧಿತರು. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಇವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದನ್ನೂ ಓದಿ | ಕಲ್ಲಗಂಗೂರು ಸ್ಪೋಟ ಕೇಸ್, ಸ್ಪೋಟಕ ಪರೈಕೆ ಮಾಡಿದ್ದ ಅಪ್ಪ, ಮಗ ಮುಂಬೈನಲ್ಲಿ ಅರೆಸ್ಟ್
ಸ್ಪೋಟದ ಬಳಿಕ ಶಂಕರಗೌಡ ಕುಲಕರ್ಣಿ ಮತ್ತು ಅವಿನಾಶ್ ಕುಲಕರ್ಣಿ ತಲೆಮರೆಸಿಕೊಂಡಿದ್ದರು. ಭದ್ರಾವತಿ ಟೌನ್ ಠಾಣೆ ಇನ್ಸ್ ಪೆಕ್ಟರ್ ರಾಘವೇಂದ್ರ ಕಾಂಡಿಕೆ, ವಿನೋಬನಗರ ಠಾಣೆ ಪಿಎಸ್ಐ ಉಮೇಶ್, ಸಿಬ್ಬಂದಿಗಳಾದ ನಾಗರಾಜ್, ಸಂದೀಪ್ ಅವರ ತಂಡ ಇವರಿಗಾಗಿ ಶೋಧ ಕಾರ್ಯ ನಡೆಸಿತ್ತು.
ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ
ಹಾವೇರಿ, ದಾವಣಗೆರೆ, ಜಗಳೂರು, ಚನ್ನಗಿರಿಗೆ ತೆರಳಿ ತನಿಖೆ ನಡೆಸಿದ್ದ ಪೊಲೀಸರಿಗೆ ಇಬ್ಬರ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಚನ್ನಗಿರಿಯಲ್ಲಿ ಶಂಕರಗೌಡ ಕುಲಕರ್ಣಿ ಮತ್ತು ಅವಿನಾಶ್ ಕುಲಕರ್ಣಿಯನ್ನು ಬಂಧಿಸಲಾಗಿದೆ.
ಈತನಕ ಎಂಟು ಮಂದಿ ಅರೆಸ್ಟ್
ಘಟನೆ ಸಂಬಂಧ ಈತನಕ ಎಂಟು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಸ್ಪೋಟ ಸಂಭವಿಸುತ್ತಿದ್ದಂತೆ ಕ್ರಷರ್ ಮಾಲೀಕ ಬಿ.ವಿ.ಸುಧಾಕರ್, ನರಸಿಂಹ ಸೇರಿ ನಾಲ್ವರನ್ನು ಬಂಧಿಸಲಾಗಿತ್ತು. ಈಗ ಸ್ಪೋಟಕ ಪೂರೈಸಿದ್ದ ಇಬ್ಬರು, ಕ್ರಷರ್ ಜಾಗದ ಮಾಲೀಕರು ಅರೆಸ್ಟ್ ಆಗಿದ್ದು ಈತನಕ ಎಂಟು ಮಂದಿಯ ಬಂಧನವಾದಂತಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]