ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022
ಶಿವಮೊಗ್ಗ ನಗರದಲ್ಲಿ ಇನ್ನೆರಡು ದಿನ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಬುಧವಾರ ಬೆಳಗ್ಗೆವರೆಗೆ ಕರ್ಫ್ಯೂ ಇತ್ತು. ಆದರೆ ಕೆಲವು ಘಟನೆಗಳು ಹಿನ್ನೆಲೆ ಶುಕ್ರವಾರ ಬೆಳಗ್ಗೆವರೆಗೆ ಕರ್ಫ್ಯೂ ವಿಸ್ತರಣೆ ಮಾಡಲಾಗುತ್ತಿದೆ.
ಕರ್ಫ್ಯೂ ಜಾರಿಯಲ್ಲಿ ಇರುವ ಅವಧಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು, ನಗರ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 9 ಗಂಟೆವರೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ದೊಡ್ಡಪೇಟೆ, ಕೋಟೆ ಮತ್ತು ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.