SHIVAMOGGA LIVE NEWS | CYCLONE | 11 ಮೇ 2022
ಆಸಾನಿ ಚಂಡಮಾರುತದ ಪರಿಣಾಮ ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಆಗುತ್ತಿದೆ. ಇನ್ನು ಮೂರ್ನಾಲ್ಕು ದಿನ ಮಳೆ ಸುರಿಯುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬುಧವಾರ ಬೆಳಗ್ಗೆಯಿಂದಲೆ ಜಿಟಿಜಿಟಿ ಮಳೆ ಆರಂಭವಾಗಿದೆ. ಜಿಲ್ಲೆಯಾದ್ಯಂತ ಮಳೆ ಬೀಳುತ್ತಿದೆ. ಆಸಾನಿ ಚಂಡಮಾರುತದ ಪರಿಣಾಮ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಪ್ರದೇಶ ಮತ್ತು ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ ಆಗುವ ಸಂಭವವಿದೆ ಎಂದು ಹಮಾವಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಮೂರ್ನಾಲ್ಕು ದಿನ ಇದೆ ರೀತಿ ಮಳೆ ಆಗಲಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ | ಮುಖ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ, ಜನರಲ್ಲಿ ಢವಢವ, ವಿಡಿಯೋ ವೈರಲ್