SHIVAMOGGA LIVE NEWS | 24 APRIL 2023
ANANDAPURA : ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ಲಾರಿಯೊಂದು (Truck) ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೆ ಸಮಸ್ಯೆಯಾಗಿಲ್ಲ. ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ.
ಗೌತಮಪುರ ಸಮೀಪದ ಬೀರಿನ ಕಣವಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ (Truck) ಪಲ್ಟಿ ಹೊಡೆದಿದೆ. ಈ ಲಾರ ಮಂಗಳೂರಿನಿಂದ ರಾಣೆಬೆನ್ನೂರಿಗೆ ತೆರಳುತ್ತಿತ್ತು. ಅಪಘಾತದಲ್ಲಿ ಸಿಲಿಂಡರ್ಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಬಿದ್ದಿದ್ದವು. ಚಾಲಕ ಶಿವಲಿಂಗಯ್ಯ ಹಿರೇಮಠ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ.
ಇದನ್ನೂ ಓದಿ – ಹೊಳೆಹೊನ್ನೂರು ಸಮೀಪ ನೀರಿನಲ್ಲಿ ಮುಳುಗಿ ರೈತ ಸಾವು