ಶಿವಮೊಗ್ಗ ಲೈವ್.ಕಾಂ | SHIMOGA NEWS | 22 FEBRUARY 2021
ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಈ ಬಾರಿಯೂ ವಿಭಿನ್ನವಾಗಿ ಆಚರಿಸಿದರು. ಶಿವಮೊಗ್ಗದ ಹರಿಗೆಯಲ್ಲಿರುವ ಸುರಭಿ ತೆರೆದ ತಂಗುದಾಣ ಸಂಸ್ಥೆಯಲ್ಲಿರುವ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಲಾಯಿತು.
ಅಖಿಲ ಕರ್ನಾಟಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇನಾ ಸಮಿತಿ ವತಿಯಿಂದ ಹರಿಗೆಯಲ್ಲಿ ದರ್ಶನ್ ಅವರ 44ನೇ ಹುಟ್ಟುಹಬ್ಬ ಆಚರಿಸಲಾಯಿತು. ಸುರಭಿ ಸಂಸ್ಥೆಯ ಮಕ್ಕಳಿಗೆ ಅಗತ್ಯ ವಸ್ತುಗಳ ಪೂರೈಕೆ ಮಾಡಲಾಯಿತು.
ಸಂಘದ ಜಿಲ್ಲಾಧ್ಯಕ್ಷ ಶರತ್ ರಾಜ್, ಜೂನಿಯರ್ ದರ್ಶನ್ ಅಭಿ, ನಂದನ್ ಗೌಡ, ಶ್ರೀನಿವಾಸ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]