ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020
ಕಡೂರು ಸಮೀಪ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ತರಲಾಗಿದೆ.
ಆಂಬುಲೆನ್ಸ್ ಮೂಲಕ ಧರ್ಮೇಗೌಡ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ತರಲಾಗಿದೆ. ಧರ್ಮೇಗೌಡ ಅವರ ಕುಟುಂಬದವರು ಈ ಸಂದರ್ಭ ಉಪಸ್ಥಿತರಿದ್ದರು. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ಇದಕ್ಕಾಗಿ ಪೂರ್ಣ ಸಿದ್ಧತೆ ಮಾಡಕೊಳ್ಳಲಾಗಿದೆ.
ಶಿವಮೊಗ್ಗ ಜಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸೇರಿದಂತೆ ಹಿರಿಯ ಅಧಿಕಾರಿಗಳು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]