SHIVAMOGGA LIVE NEWS | 5 DECEMBER 2023
SHIKARIPURA : ಕಾಂಗ್ರೆಸ್ ಕಾರ್ಯಕರ್ತರನ್ನು ಪುಢಾರಿಗಳು ಎಂದಿರುವ ಬಿ.ವೈ.ವಿಜಯೇಂದ್ರ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿ, ಅದನ್ನು ಹಿಂಪಡೆಯಬೇಕು ಎಂದು ಜಿಲ್ಲಾ ಕಾಂಗ್ರೆಸ್ ( Congress) ಉಪಾಧ್ಯಕ್ಷ ಭಂಡಾರಿ ಮಾಲತೇಶ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಚೆಗೆ ಶಿಕಾರಿಪುರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ (Congress) ಕಾರ್ಯಕರ್ತರನ್ನು ಪುಢಾರಿಗಳು ಎಂದು ಟೀಕಿಸಿದ್ದಾರೆ. ಇದರು ಕಾಂಗ್ರೆಸ್ ಪಕ್ಷಕ್ಕೆ, ಈ ಕ್ಷೇತ್ರದಲ್ಲಿ ಮತ ನೀಡಿದ 78 ಸಾವಿರ ಮತದಾರರಿಗೆ ಅವಮಾನ ಮಾಡಿದಂತಾಗಿದೆ. ಈ ಕೂಡಲೆ ತಮ್ಮ ಹೇಳಿಕೆ ಹಿಂಪಡೆಯಬೇಕು. ಜನ ಹಿತಕ್ಕಾಗಿ ನಡೆಯುವ ಹೋರಾಟಗಳು ನಿಮ್ಮ ಕಣ್ಣಿಗೆ ಪುಢಾರಿಯಂತೆ ಕಾಣುತ್ತಿವೆಯೇ ಎಂದು ಪ್ರಶ್ನಿಸಿದರು.
ಇದನ್ನೂ ಓದಿ –ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನಿಗೆ ಸನ್ಮಾನ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಹೆಚ್.ಬಿ.ಪಾಲಾಕ್ಷ, ಷಫಿಯುಲ್ಲಾ, ಪ್ರಶಾಂತ್, ಮಂಜುನಾಥ್ ಸೇರಿದಂತೆ ಹಲವರು ಇದ್ದರು.