ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 3 DECEMBER 2023
SHIMOGA : ದಲಿತ ಸಂಘರ್ಷ ಸಮಿತಿ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಕುವೆಂಪು ರಂಗಮಂದಿರದಲ್ಲಿ ಸಂವಿಧಾನ ರಕ್ಷಣೆಗಾಗಿ ಸಂವಿಧಾನ ಉಳಿವಿಗಾಗಿ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ ಆಯೋಜಿಸಲಾಗಿತ್ತು. ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಯಾರೆಲ್ಲ ಏನೇನು ಹೇಳಿದರು?
ಮಾವಳ್ಳಿ ಶಂಕರ್, ರಾಜ್ಯ ಪ್ರಧಾನ ಸಂಚಾಲಕ : ಧರ್ಮೋ ರಕ್ಷತಿ ರಕ್ಷಿತಃ ಅನ್ನುವುದಕ್ಕಿಂತಲು ಸಂವಿಧಾನ ರಕ್ಷಣೆ ಮಾಡಬೇಕಿದೆ. ಸಂವಿಧಾನವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡಲಿದೆ. ಸಂವಿಧಾನ ಅಪಾಯದಲ್ಲಿದೆ ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಪತ್ರಿಕಾಗೋಷ್ಠಿ ನಡೆಸಿದ್ದರು. ಈಗ ಅದು ನಿಜವಾಗುತ್ತಿದೆ ಎಂದೆನಿಸುತ್ತಿದೆ. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಜಂತರ್ ಮಂತರ್ನಲ್ಲಿ ಸಂವಿಧಾನದ ಪ್ರತಿ ಸುಟ್ಟು ಹಾಕಿದ್ದರು. ದೇಶದ ಸಂವಿಧಾನಕ್ಕೆ ಬಂದಿರುವ ಕುತ್ತನ್ನು ನಾವೆಲ್ಲ ಅರಿತುಕೊಳ್ಳಬೇಕಿದೆ.
ಡಾ. ಮಹಾದೇವಸ್ವಾಮಿ, ಸಹ್ಯಾದ್ರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ : ಸಂವಿಧಾನ ಕೇವಲ ಪುಸ್ತಕವಲ್ಲ, ಅದು ಜೀವನಾಡಿ. ಬ್ರಿಟೀಷ್ ಆಳ್ವಿಕೆಯಿಂದ ಮುಕ್ತವಾದ ನಂತರ ಯಾವ ರೀತಿ ಜೀವನ ಸಾಗಿಸಬೇಕು ಎನ್ನುವ ಆಶಯದೊಂದಿಗೆ ಸಂವಿಧಾನ ರಚನೆ ಆರಂಭವಾಯಿತು. ಆದರೆ ಸಂವಿಧಾನದ ನಿಯಮಗಳನ್ನು ಅರ್ಥ ಮಾಡಿಕೊಳ್ಳುವುದು ಮತ್ತು ಅಳವಡಿಸಿಕೊಳ್ಳುವಲ್ಲಿ ವಿಫಲರಾಗಿದ್ದೇವೆ. ಹಿಂದುಳಿದವರಿಗೆ ಪ್ರಾತಿನಿಧ್ಯ ನೀಡಲು ಸಂವಿಧಾನ ಅತ್ಯವಶ್ಯ. ಸಂವಿಧಾನವನ್ನು ಕೇವಲ ವಿಧಾನಸೌಧದಲ್ಲಿ ಇಟ್ಟು ಪೂಜೆ ಮಾಡುವುದಲ್ಲ. ಅದರ ಆಶಯವನ್ನು ಅನುಷ್ಠಾನಕ್ಕೆ ತರಬೇಕು.
ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಟಿ.ಹೆಚ್.ಹಾಲೇಶಪ್ಪ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ, ಸಂಚಾಲಕ ಎಣ್ಣೆಗೆರೆ ವೆಂಟರಾಮಯ್ಯ, ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
ಇದನ್ನೂ ಓದಿ – ಮುಷ್ಕರ ಮುಗಿಸಿ ಮನೆಗೆ ಮರಳಿದ ಅಂಗನವಾಡಿ ಕಾರ್ಯಕರ್ತೆಗೆ ಕಾದಿತ್ತು ಶಾಕ್
ಶಿವಮೊಗ್ಗ ಲೈವ್.ಕಾಂ