ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಅಕ್ಟೋಬರ್ 2021
ಒಂದೂವರೆ ವರ್ಷದ ಬಳಿಕ ಒಂದರಿಂದ ಐದನೇ ತರಗತಿಗಳು ಪುನಾರಂಭವಾಗಿದೆ. ಶಿವಮೊಗ್ಗದ ಶಾಲೆಯೊಂದರಲ್ಲಿ ಶಿಕ್ಷಣ ಸಚಿವರೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.
ಇದನ್ ಓದಿ | 20 ತಿಂಗಳ ಬಳಿಕ ಶಿವಮೊಗ್ಗದಲ್ಲೂ ಒಂದರಿಂದ ಐದನೇ ತರಗತಿ ಪುನಾರಂಭ
ಮಲವಗೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿದರು. ಶಾಲೆಗೆ ಬಂದಿದ್ದ ವಿದ್ಯಾರ್ಥಿಗಳನ್ನು ಶಿಕ್ಷಣ ಸಚಿವರು ಸ್ವಾಗತ ಕೋರಿದರು.
ಮಕ್ಕಳಿಗೆ ಪುಸ್ತಕ, ಚಾಕ್ಲೇಟ್
ಶಾಲೆಗೆ ಬಂದ ಮಕ್ಕಳನ್ನು ಸ್ವಾಗತಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮಕ್ಕಳಿಗೆ ಪುಸ್ತಕ ವಿತರಣೆ ಮಾಡಿದರು. ಈ ವೇಳೆ ಸ್ಕೂಲಿಗೆ ಬರುವುದಕ್ಕೆ ಖುಷಿ ಇದೆಯಾ ಎಂದು ಕೇಳಿ ಕಳುಹಿಸಿದರು. ಕೊಠಡಿಯೊಳಗೆ ದೀಪ ಬೆಳಗುವುದರ ಮೂಲಕ ಅಧಿಕೃತವಾಗಿ ತರಗತಿಗಳಿಗೆ ಚಾಲನೆ ನೀಡಿದರು.
ಮಲವಗೊಪ್ಪದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೂ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿ, ಪರಿಶೀಲಿಸಿದರು. ಇಲ್ಲಿಯೂ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಆಯನೂರಿಗೆ ಸಚಿವರ ಭೇಟಿ
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಆಯನೂರಿಗೆ ಸರ್ಕಾರಿ ಶಾಲೆಗೂ ಭೇಟಿ ನೀಡಿ, ಮೊದಲ ದಿನ ತರಗತಿಗಳು ಹೇಗೆ ನಡೆಯತ್ತಿವೆ ಎಂದು ಪರಿಶೀಲನೆ ನಡೆಸಿದರು.
ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ಮಕ್ಕಳು ಸಂತೋಷವಾಗಿ ಶಾಲೆಗೆ ಬಂದಿದ್ದಾರೆ. ಪೋಷಕರು ಬಂದು ತಮ್ಮ ಮಗುವನ್ನು ಶಾಲೆಗೆ ಬಿಟ್ಟು ಹೋಗುತ್ತಿದ್ದಾರೆ. ಶಿಕ್ಷಕರು, ಪೋಷಕರು, ಸಾರ್ವಜನಿಕರು ಮಕ್ಕಳಿಗೆ ಸ್ವಾಗತ ಕೋರುತ್ತಿರುವುದನ್ನು ನೋಡಿದೆರೆ ಸಮಾಜದಲ್ಲಿ ಶಿಕ್ಷಣದಲ್ಲಿ ಆದ್ಯತೆ ಹೇಗಿದೆ ಎಂಬುದನ್ನು ತೋರಿಸುತ್ತದೆ ಎಂದರು.