ಶಿವಮೊಗ್ಗ ಲೈವ್.ಕಾಂ | SHIMOGA | 11 ಫೆಬ್ರವರಿ 2020
ಬೀರೂರು – ಶಿವಮೊಗ್ಗ ತಾಳಗುಪ್ಪ ರೈಲು ಮಾರ್ಗದ ವಿದ್ಯುದೀಕರಣ ಯೋಜನೆಗೆ ಕೇಂದ್ರ ಸರಕಾರವು ಮಂಜೂರು ನೀಡಿದೆ. 2020 – 21ನೇ ಸಾಲಿನ ಬಜೆಟ್ನಲ್ಲಿ ವಿದ್ಯುದೀಕರಣ ಕಾಮಗಾರಿಗಾಗಿ 25 ಕೋಟಿ ರೂ.ಗಳನ್ನು ಘೋಷಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಸಂಸದನಾದ ಬಳಿಕ ಶಿವಮೊಗ್ಗಕ್ಕೆ ಹಲವು ರೈಲುಗಳನ್ನು ತರಲು ಶ್ರಮ ವಹಿಸಲಾಗಿತ್ತು. ಅದರ ಪರಿಣಾಮವಾಗಿ ಹಲವು ರೈಲುಗಳು ಲಭ್ಯವಾಗಿವೆ. ಮಲೆನಾಡಿನೊಂದಿಗೆ ಮಧ್ಯ ಮತ್ತು ಉತ್ತರ ಕರ್ನಾಟಕಕ್ಕೆ ನೇರ ಸಂಪರ್ಕ ಕಲ್ಪಿಸುವ ಪ್ರಯತ್ನ ಯಶಸ್ವಿಯಾಗಿದೆ. ಇದರ ಪರಿಣಾಮ ಈಗಾಗಲೇ ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರ ಹಾಗೂ ಶಿವಮೊಗ್ಗ – ಹರಿಹರ ನೂತನ ರೈಲು ಮಾರ್ಗಗಳು ಮಂಜೂರಾಗಿದ್ದು, ಯೋಜನೆಗಳು ಅನುಷ್ಟಾನದ ಹಂತದಲ್ಲಿವೆ.
ಬೀರೂರು ಶಿವಮೊಗ್ಗ-ತಾಳಗುಪ್ಪ ಮಾರ್ಗವನ್ನು ವಿದ್ಯುದೀಕರಣಗೊಳಿಸಬೇಕೆಂಬ ಒತ್ತಾಸೆಗೆ ಕೇಂದ್ರ ಸರಕಾರ ಸ್ಪಂದಿಸಿದೆ. ಇದರಿಂದ ಈ ಭಾಗದ ರೈಲುಗಳು ವಿದ್ಯುತ್ ಎಂಜಿನ್ಗಳ ಸಹಾಯದಿಂದ ಚಲಿಸಲಿವೆ, ಇದರಿಂದ ರೈಲುಗಳ ವೇಗ ಹೆಚ್ಚಾಗಲಿದ್ದು, ಮಾಲಿನ್ಯ ರಹಿತ ರೈಲು ಸಂಚಾರ ಸಾಕಾರಗೊಳ್ಳಲಿದೆ.
ನಮ್ಮ ಬೇಡಿಕೆಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ, ಇದಕ್ಕೆ ಸಹಕರಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ, ರೈಲ್ವೆ ಸಚಿವರಾದ ಪೀಯುಶ್ ಗೋಯಲ್, ರೈಲ್ವೆ ಖಾತೆ ಸಚಿವರಾದ ಸುರೇಶ್ ಅಂಗಡಿ ಅವರಿಗೆ ಜಿಲ್ಲೆಯ ಜವತ ಪರವಾಗಿ ಧನ್ಯವಾದಗಳು ಎಂದು ಬಿ.ವೈ.ರಾಘವೇಂದ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]