ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 JUNE 2021
ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಬಳಿ ಕಾಡಾನೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಇವತ್ತು ಬೆಳಗ್ಗೆ ಕಾಡಾನೆ ಪ್ರತ್ಯಕ್ಷವಾಗಿದೆ. ಆನೆಯನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಪಟಾಕಿ ಸಿಡಿಸಿ ಅರಣ್ಯಾಧಿಕಾರಿಗಳು ಆನೆಯನ್ನು ಪುನಃ ಕಾಡಿಗೆ ಓಡಿಸಿದ್ದಾರೆ.
ಇದನ್ನೂ ಓದಿ | ಅಪರೇಷನ್ ಮುಗಿದು ವಾರ ಕಳೆಯೋದರಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ, ತೋಟಗಳಿಗೆ ದಾಳಿ
ವನ್ಯಜೀವಿಗಳು ಕಾಡಿನಿಂದ ಹೊರಗೆ ಬಾರದಂತೆ ಟ್ರೆಂಚ್ ಹೊಡೆಯಲಾಗಿದೆ. ಟ್ರೆಂಚ್ ಬಳಿಯಲ್ಲೇ ಇದ್ದ ಕಾಡಾನೆ, ಪಟಾಕಿ ಸದ್ದಿಗೆ ಹೆದರಿ ಹಿಂದಕ್ಕೆ ಹೋಗಿದೆ. ಈ ಭಾಗದಲ್ಲಿ ಹುಲಿ, ಚಿರತೆಗಳು ಆಗಾಗ ಕಾಣಸುತ್ತವೆ. ಆದರೆ ಇದೆ ಮೊದಲ ಬಾರಿಗೆ ಕಾಡಾನೆ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರನ್ನು ಚಿಂತೆಗೀಡು ಮಾಡಿದೆ. ಆನೆ ಜೊತೆಗೆ ಮರಿ ಇತ್ತು ಎಂದು ಹೇಳಲಾಗುತ್ತಿದೆ.
ಉಂಬ್ಳೆಬೈಲು ವಲಯದ ಅರಣ್ಯದಲ್ಲಿರುವ ಆನೆಗಳೆ ಗೋಣಿಬೀಡು ಬಳಿ ಪ್ರತ್ಯಕ್ಷವಾಗಿವೆ. ನಾಲ್ಕು ಆನೆಗಳಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದರು. ಕೆಲವು ತಿಂಗಳ ಹಿಂದೆ ಇದೆ ಆನೆಗಳು ಲಕ್ಕಿನಕೊಪ್ಪ ಬಳಿ ಪ್ರತ್ಯಕ್ಷವಾಗಿದ್ದವು. ತೋಟ, ಗದ್ದೆಯಲ್ಲಿ ಓಡಾಡಿದ್ದವು. ಇವುಗಳನ್ನು ಭದ್ರಾ ಅಭಯಾರಣ್ಯದೊಳಗೆ ಓಡಿಸಲು ಸಕ್ರೆಬೈಲು ಬಿಡಾರದ ಆನೆಗಳನ್ನು ಕರೆತಂದು ಕಾರ್ಯಾಚರಣೆ ನಡೆಸಲಾಗಿತ್ತು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಶಿವಮೊಗ್ಗ ಲೈವ್.ಕಾಂ