ಶಿವಮೊಗ್ಗ ಲೈವ್.ಕಾಂ | SAGARA NEWS | 8 ಸೆಪ್ಟಂಬರ್ 2020
ಸೊಪ್ಪಿನಬೆಟ್ಟ ಅತಿಕ್ರಮ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭೀಮನಕೋಣೆ ಗ್ರಾಮ ಸೇವಾ ಸಂಘದ ವತಿಯಿಂದ ಸಾಗರ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಆನಂದಪುರ ಹೋಬಳಿ ಕೆರೆಕೊಪ್ಪ ಗ್ರಾಮದಲ್ಲಿ ಕೆಲವು ಪ್ರಭಾವಿಗಳು ಸೊಪ್ಪನಬೆಟ್ಟವನ್ನು ಅತಿಕ್ರಮ ಮಾಡಿಕೊಂಡಿದ್ದಾರೆ. ಗಿಡಮರಗಳನ್ನು ಬೇಲಿ ಹಾಕಿಕೊಳ್ಳುತ್ತಿದ್ದಾರೆ. ಇದರಿಂದ ಸೊಪ್ಪನಬೆಟ್ಟಕ್ಕೆ ಆತಂಕ ಎದುರಾಗಿದೆ.
ಸೊಪ್ಪಿನಬೆಟ್ಟ ಅತಿಕ್ರಮ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಭೀಮನಕೋಣೆ ಗ್ರಾಮ ಸೇವಾ ಸಂಘ ಒತ್ತಾಯಿಸಿದೆ.
ಸಂಘದ ಪ್ರಮುಖರಾದ ರಾಘವೇಂದ್ರ, ನಾಗರಾಜ್, ಎಂ.ಎಸ್.ನಾಗರಾಜ್, ರಾಧಾಕೃಷ್ಣ ಸೇರಿದಂತೆ ಹಲವರು ಇದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]