ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟಂಬರ್ 2020
ಕರೋನ ಪಾಸಿಟಿವ್ ಬಂದ ಹಿನ್ನೆಲೆ ಶಿವಮೊಗ್ಗ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರಿಗು ಚಿಕಿತ್ಸೆ ಆರಂಭವಾಗಿದೆ.
ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೋಮವಾರ ಬೆಂಗಳೂರಿಗೆ ತೆರಳಿದ್ದರು. ಕರೋನ ದೃಢವಾದ ಹಿನ್ನೆಲೆ ಅಲ್ಲಿಯೇ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನಡೆಯುತ್ತಿದೆ. ರೋಗ ಲಕ್ಷಣವಿಲ್ಲದಿದ್ದರೂ ಈಶ್ವರಪ್ಪ ಅವರಿಗೆ ಪಾಸಿಟಿವ್ ಬಂದಿದೆ.
ತೀರ್ಥಹಳ್ಳಿ ಎಂಎಲ್ಎ ಬೆಂಗಳೂರಿಗೆ
ಮತ್ತೊಂದೆಡೆ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರಿಗೂ ಕರೋನ ಪಾಸಿಟಿವ್ ಬಂದಿತ್ತು. ಅವರು ಕೂಡ ಬೆಂಗಳೂರಿಗೆ ತೆರಳಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೂ ರೋಗ ಲಕ್ಷಣವಿಲ್ಲ. ಆದರೂ ಕರೋನ ಪಾಸಿಟವ್ ಬಂದಿದೆ.
ಬೇಗ ಗುಣವಾಗಲಿ ಅಂತಾ ಹರೈಕೆ
ಸಚಿವ ಕೆ.ಎಸ್.ಈಶ್ವರಪ್ಪ ಅವರು ಬೇಗ ಗುಣವಾಗಲಿ ಎಂದು ಸಂಸದ ಬಿ.ವೈ.ರಾಘವೇಂದ್ರ ಟ್ವೀಟ್ ಮಾಡಿದ್ದಾರೆ. ಮತ್ತೊಂದೆಡೆ ಈಶ್ವರಪ್ಪ ಅವರ ಅಭಿಮಾನಿಗಳು ವಿಶೇಷ ಪೂಜೆ ಆಯೋಜಿಸಿದ್ದಾರೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]