SHIVAMOGGA LIVE NEWS
SHIMOGA | ಕೆಪಿಸಿಎಲ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಕಾರ್ಗಲ್ ಠಾಣೆ ಸಬ್ ಇನ್ಸ್ ಪೆಕ್ಟರ್ (SUB INSPECTOR) ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷ ಸುಭಾಷ್ ಚಂದ್ರ ತೇಜಸ್ವಿ ಎಚ್ಚರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಭಾಷ್ ಚಂದ್ರ ತೇಜಸ್ವಿ ಅವರು, ಜೋಗ ಕೆಪಿಸಿಎಲ್ ಅತ್ಯಂತ ಸೂಕ್ಷ್ಮ ವಲಯವಾಗಿದೆ. ಇಲ್ಲಿ ಭದ್ರತಾ ಕಾರ್ಯದಲ್ಲಿದ್ದ ಮಾಜಿ ಸೈನಿಕ ಶಿವಕುಮಾರ್ ಅವರ ಮೇಲೆ ಪಿಎಸ್ಐ (SUB INSPECTOR) ತಿರುಮಲೇಶ್ ಅವರು ಹಲ್ಲೆ ಮಾಡಿದ್ದಾರೆ. ಇದರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಎಂದರು.
ಕೆಪಿಸಿಎಲ್ ಪ್ರವೇಶಿಸುವ ಪ್ರತಿ ವಾಹವದ ತಪಾಸಣೆ ನಡೆಸಲಾಗುತ್ತದೆ. ಆದರೆ ಪಿಎಸ್ಐ ತಿರುಮಲೇಶ್ ಅವರ ವಾಹನವನ್ನು ಭದ್ರತಾ ಸಿಬ್ಬಂದಿ ತಡೆದಿಲ್ಲ. ಇದಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ತಮ್ಮ ಬಳಿ ಇದೆ. ಅಧಿಕಾರ ದುರ್ಬಳಕೆ ಮಾಡಿಕೊಂಡ ಪಿಎಸ್ಐ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸುತ್ತಿದ್ದಾವೆ ಎಂದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಪಾಸ್ ವಿವಾದ, ಪೊಲೀಸ್, ಭದ್ರತಾ ಸಿಬ್ಬಂದಿ ನಡುವಿನ ಬಹುದಿನದ ಸಂಘರ್ಷ ಸ್ಫೋಟ, ವಿಡಿಯೋಗಳು ವೈರಲ್
ಒಂದು ವೇಳೆ ಪಿಎಸ್ಐ (SUB INSPECTOR) ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ, ರಾಜ್ಯಾದ್ಯಂತ ಮಾಜಿ ಸೈನಿಕರು ಹೋರಾಟ ಮಾಡುತ್ತೇವೆ ಎಂದು ಸುಭಾಷ್ ಚಂದ್ರ ತೇಜಸ್ವಿ ತಿಳಿಸಿದರು.
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ, ಚೂಡಪ್ಪ, ಸುರೇಶ್, ಮಾಲತೇಶ್ ಸೇರಿದಂತೆ ಹಲವರು ಇದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ನೂತನ ಮೇಯರ್, ಉಪ ಮೇಯರ್ ಆಯ್ಕೆಗೆ ದಿನಾಂಕ ನಿಗದಿ, ಯಾವಾಗ?
(SUB INSPECTOR)
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.