ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 19 NOVEMBER 2020
ನಿಗದಿಗಿಂತಲೂ ಅಧಿಕ ದರದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ದೂರುಗಳ ಹಿನ್ನೆಲೆ ತೀರ್ಥಹಳ್ಳಿಯಲ್ಲಿ ಮದ್ಯದಂಗಡಿಗಳ ಮೇಲೆ ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಎಂಆರ್ಪಿ ದರಕ್ಕಿಂತಲೂ ಅಧಿಕ ಮೊತ್ತಕ್ಕೆ ಮದ್ಯ ಮಾರಾಟ ಮಾಡುತ್ತಿರುವ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಉಪ ವಿಭಾಗದಲ್ಲಿ ಮೂರು ಮದ್ಯದ ಅಂಗಡಿಗಳ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದರು.
ಅಧಿಕ ದರ ಪಡೆಯುತ್ತಿದ್ದ ಕುರಿತು ಮೂರು ಅಂಗಡಿಗಳ ವಿರುದ್ಧ ದೂರು ಬಂದಿತ್ತು. ಮೂರು ಅಂಗಡಿಗಳ ವಿರುದ್ಧ ಅಬಕಾರಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕ್ಯಾಪ್ಟನ್ ಅಜಿತ್ ಕುಮಾರ್ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]