ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MAY 2021
ಕರೋನದಿಂದ ಶಿವಮೊಗ್ಗದ ಪ್ರಖ್ಯಾತ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.
ಶಿವಮೊಗ್ಗದ ಪ್ರಖ್ಯಾತ ನರರೋಗ ತಜ್ಞ ಡಾ.ಶಿವರಾಮ ಕೃಷ್ಣ ಅವರು ಕೋವಿಡ್ನಿಂದ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿತ್ತು.
ಈ ಸುಳ್ಳು ಸುದ್ದಿಯಿಂದ ತಮಗೆ ಮಾನಸಿಕ ಆಘಾತವಾಗಿದೆ. ವೃತ್ತಿಯ ಮೇಲೂ ದುಷ್ಪರಿಣಾಮ ಉಂಟಾಗಿದೆ ಎಂದು ಆರೋಪಿಸಿ, ಡಾ. ಶಿವರಾಮ ಕೃಷ್ಣ ಅವರು ದೂರು ನೀಡಿದ್ದಾರೆ.
ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]