ಶಿವಮೊಗ್ಗ ಲೈವ್.ಕಾಂ | SAGARA NEWS | 2 ನವೆಂಬರ್ 2020
ಸಾಲ ಬಾಧೆಯಿಂದ ಮನನೊಂದು ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗೌತಮಪುರ ಗ್ರಾಮದ ಮಂಚಾಲೆ ಪ್ರವೀಣ್ ಕುಮಾರ್ (25) ಎಂದು ಗುರುತಿಸಲಾಗಿದೆ.
ಪ್ರವೀಣ್ ಕುಮಾರ್ ಭಾನುವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕ್ಯಾಟರಿಂಗ್ ಮಾಡಿಕೊಂಡಿದ್ದ ಪ್ರವೀಣ್, ಲಾಕ್ ಡೌನ್ ವೇಳೆ ಊರಿಗೆ ಮರಳಿದ್ದರು. ಇಲ್ಲಿ ಕಬಾಬ್ ಮಾರಾಟ ಅಂಗಡಿ ತೆರೆದಿದ್ದರು. ಜೊತೆಗೆ ಕೃಷಿ ಮಾಡಿಕೊಂಡಿದ್ದರು.
ಕೃಷಿ ಅಭಿವೃದ್ಧಿಗಾಗಿ ತಂದೆ ಬ್ಯಾಂಕ್ನಲ್ಲಿ, ತಾಯಿ ಗ್ರಾಮಾಭಿವೃದ್ಧಿ ಸಂಘದಲ್ಲಿ ಸಾಲ ಮಾಡಿದ್ದರು. ಇದನ್ನು ತೀರಿಸಲು ಸಾಧ್ಯವಾಗದೆ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿನದಲ್ಲಿ ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.