SHIVAMOGGA LIVE NEWS | 20 JANUARY 2023
RIPPONPETE : ಸಾಲ ಬಾಧೆಗೆ ಮನನೊಂದು ರೈತರೊಬ್ಬರು (farmer) ಜಮೀನಿನಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಜಮೀನಿಗೆ ಹೋದವರು ಮನೆಗೆ ಹಿಂತಿರುಗದ ಹಿನ್ನೆಲೆ ಕುಟುಂಬದವರು ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.
ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಬುಲ್ಡೋಜರ್ ಗುಡ್ಡದ ನಿವಾಸಿ ರಾಜಪ್ಪ (63) ಆತ್ಮಹತ್ಯೆ (farmer) ಮಾಡಿಕೊಂಡಿರುವ ರೈತ. 1.35 ಎಕರೆ ಜಮೀನು ಇದ್ದು, ಭತ್ತ ಮತ್ತು ಶುಂಠಿ ಬೆಳೆದಿದ್ದಾರೆ. ವಿವಿಧ ಬ್ಯಾಂಕು ಮತ್ತು ಖಾಸಗಿಯಾಗಿ ಲಕ್ಷಾಂತರ ರೂ. ಸಾಲ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಇದನ್ನು ತೀರಿಸಲಾಗಿದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ ತಹಶೀಲ್ದಾರ್ ಹುಚ್ಚರಾಯಪ್ಪ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗ ನಿಲ್ದಾಣದಲ್ಲಿ ನೀರಿನ ಬಾಟಲಿ ಕೊಂಡು ಬಸ್ ಹತ್ತಿದ ವಿದ್ಯಾರ್ಥಿನಿಗೆ ಕಾದಿತ್ತು ಆಘಾತ