ಶಿವಮೊಗ್ಗ ಲೈವ್.ಕಾಂ | HOSANAGARA NEWS | 14 MAY 2021
ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಹೊಸನಗರ ತಾಲೂಕು ಹುಂಚದ ಹೊಂಡ್ಲಗದ್ದೆ ಸಮೀಪದ ಹಾದಿಗದ್ದೆಯ ರೈತ ಉಮೇಶ್ (47) ಸಿಡಿಲಿಗೆ ಮೃತಪಟ್ಟ ದುರ್ದೈವಿ.
ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಉಮೇಶ್ ಮೃತಪಟ್ಟಿದ್ದಾರೆ. ಬಹಳ ಹೊತ್ತು ಮನೆಗೆ ಬಾರದಿದ್ದರಿಂದ ಕುಟುಂಬದವರು ಹುಡುಕಿಕೊಂಡು ಹೋದಾಗ ಘಟನೆ ಬೆಳಕಿಗೆ ಬಂದಿದೆ.
ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗುರುವಾರ ಗುಡುಗು ಸಹಿತ ಭಾರಿ ಮಳೆಯಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]