ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 16 ಜುಲೈ 2019
ಅಡಕೆ ತೋಟದಲ್ಲಿ ಕೃಷಿ ಕೆಲಸಕ್ಕೆ ಅಲುಮಿನಿಯಮ್ ಏಣಿ ತರುವಾಗ ವಿದ್ಯುತ್ ತಂತಿಗೆ ತಗುಲಿ, ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಲೂಕಿನ ಬಸವಾನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋರಳಿಯಲ್ಲಿ ನಡೆದಿದೆ.
ನಾಗಪ್ಪಗೌಡ (64) ಮೃತ ರೈತ. ತೋಟದಲ್ಲಿ ಕೆಲಸಕ್ಕಾಗಿ ಅಲುಮಿನಿಯಮ್ ಏಣಿ ತರುವಾಗ ಘಟನೆ ನಡೆದಿದೆ. ಮೆಸ್ಕಾಂ ಇಲಾಖೆ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494ಈ ಮೇಲ್ | [email protected]