SHIVAMOGGA LIVE NEWS | 24 APRIL 2023
HOLEHONNURU : ಎತ್ತುಗಳಿಗೆ ನೀರು ಕುಡಿಸಲು ಹೋದಾಗ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ (Drowned) ರೈತರೊಬ್ಬರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ಮಂಗೋಟೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ರೈತ ಕೃಷ್ಣಪ್ಪ (69) ಮೃತ ದುರ್ದೈವಿ. ಮಗನೊಂದಿಗೆ ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಬರುವಾಗ ಎತ್ತುಗಳಿಗೆ ನೀರು ಕುಡಿಸಲು ತುಂಗಭದ್ರಾ ನದಿಗೆ ತೆರಳಿದ್ದರು. ಈ ವೇಳೆ ಕೃಷ್ಣಪ್ಪ ಅವರು ಕಾಲು ಜಾರಿ ಬಿದ್ದಿದ್ದಾರೆ (Drowned) ಎನ್ನಲಾಗಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಹುಷಾರ್, ನಿಮಗೂ ಬರಬಹುದು ಇಂಥಾ ಮೆಸೇಜ್, ಯಾಮಾರಿದ್ರೆ ಸಂಕಷ್ಟ ಫಿಕ್ಸ್, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್