SHIVAMOGGA LIVE NEWS | 27 FEBRUARY 2024
SHIMOGA : ಕನಿಷ್ಠ ಬೆಂಬಲ ಬೆಲೆ, ಅಗತ್ಯ ವಸ್ತುಗಳ ಕಾಯ್ದೆಗೆ ತಿದ್ದುಪಡಿ ಮಾಡಬಾರದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇವತ್ತು ಗ್ರಾಮ ಬಂದ್ ಚಳವಳಿ ನಡೆಸಲಾಯಿತು. ಈ ಹಿನ್ನೆಲೆ ಶಿವಮೊಗ್ಗದ ಮಲವಗೊಪ್ಪದಲ್ಲಿರುವ ಭದ್ರಾ ಕಾಡಾ ಕಚೇರಿ ಮುಂಭಾಗ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮುಖಂಡ ಕೆ.ಟಿ.ಗಂಗಾಧರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ರೈತ ವಿರೋಧಿ ಮೂರು ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇದೆ ವೇಳೆ ಮಾತನಾಡಿದ ರೈತ ಮುಖಂಡ ಕೆ.ಟಿ.ಗಂಗಾಧರ್, ಸ್ವಾಮಿನಾಥನ್ ವರದಿ ಜಾರಿಗೊಳಿಸುವುದಾಗಿ ಚುನಾವಣೆ ಪ್ರಣಾಳಿಕೆಯಲ್ಲಿ ಈ ಹಿಂದೆ ಬಿಜೆಪಿ ಘೋಷಿಸಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಮಾತು ತಪ್ಪಿದೆ. ಈಗ ಸ್ರುಪ್ರೀಂ ಕೋರ್ಟ್ನಲ್ಲಿ ಸ್ವಾಮಿನಾಥನ್ ವರದಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಅಫಿಡವಿಟ್ ಸಲ್ಲಿಸಿದೆ. ಕೇಂದ್ರ ಸರ್ಕಾರ ಕೂಡಲೆ ಅಫಿಡವಿಟ್ ಹಿಂಪಡೆಯಬೇಕು. ಆಗ ಮಾತ್ರ ರೈತರ ಬೆಳಗೆ ಉತ್ತಮ ಬೆಲೆ, ಆಹಾರ ಸ್ವಾರ್ವಭೌಮತ್ವ, ಗ್ರಾಹಕರಿಗೆ ನ್ಯಾಯಯುತ ಬೆಲೆಯಲ್ಲಿ ಆಹಾರೋತ್ಪನ್ನ ಸಿಗಲಿದೆ ಎಂದು ಆಗ್ರಹಿಸಿದರು.
ಇದನ್ನೂ ಓದಿ – ಶಿವಮೊಗ್ಗ ಲೋಕಸಭೆಗೆ ಕಾಂಗ್ರೆಸ್ನಿಂದ ‘ಅಚ್ಚರಿ ಅಭ್ಯರ್ಥಿ’, ಈ ಇಬ್ಬರ ಪೈಕಿ ಕಣಕ್ಕಿಳಿಯೋದು ಯಾರು?