ಶಿವಮೊಗ್ಗದ ಲೈವ್.ಕಾಂ | SHIMOGA NEWS | 19 ಫೆಬ್ರವರಿ 2022
ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಪ್ರತಿಭಟನೆ ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಫೆ.17ರಂದು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ನಿಷೇಧಾಜ್ಞೆ ಉಲ್ಲಂಘಿಸಿ ಗುಂಪುಗೂಡಿ, ಮುತ್ತಿಗೆ ಹಾಕಲು ಯತ್ನಿಸಿದ್ದಕ್ಕೆ ಸುಮಾರು 15 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸಿಗರ ಬಂಧನ
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ರಂಜಿತ್, ಕುಮರೇಶ್ ಸೇರಿ 15 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಸಂಘಟನೆ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.