SHIVAMOGGA LIVE NEWS | 14 ಮಾರ್ಚ್ 2022
ದಿನಸಿ ಅಂಗಡಿಯಲ್ಲಿಬೆಂಕಿ ಕಾಣಿಸಿಕೊಂಡು ವಸ್ತುಗಳೆಲ್ಲ ಸುಟ್ಟು ಕರಕಲಾಗಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಕುರಿತು ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಯುತ್ತಿದೆ.
ಸೊರಬ ತಾಲೂಕು ಚಂದ್ರಗುತ್ತಿ ಹೋಬಳಿಯ ಗುಂಜನೂರಿನಲ್ಲಿ ಘಟನೆ ಸಂಭವಿಸಿದೆ. ಕಾಳಪ್ಪ ಎಂಬುವವರಿಗೆ ಸೇರಿದ ದಿನಸಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕಾಳಪ್ಪ ಅವರ ಮನೆಗೆ ಹೊಂದಿಕೊಂಡ ಹಾಗೆ ಅಂಗಡಿ ಇದೆ. ಭಾನುವಾರ ಕಾಳಪ್ಪ ಅವರ ಕುಟುಂಬದವರು ಸಂಬಂಧಿಯ ಮನೆಗೆ ತೆರಳಿದ್ದರು. ಆಗ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ಇದೆ. ಈ ಕುರಿತು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200