SHIVAMOGGA LIVE | 3 JULY 2023
SHIMOGA : ಒಂಭತ್ತು ವರ್ಷ ಕಳೆದರು ಕೊಟ್ಟ ಭರವಸೆಗಳನ್ನು ಈಡೇರಿಸದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ (Sathyagraha) ನಡೆಸಿದರು. ಜಿಲ್ಲಾ ಕಾಂಗ್ರೆಸ್ನ ಪ್ರಮುಖರು ಅವರಿಗೆ ಬೆಂಬಲವಾಗಿ ಧರಣಿ ನಡೆಸಿದರು.
ಶಿವಮೊಗ್ಗದ ಗಾಂಧಿ ಪಾರ್ಕ್ನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂಭಾಗ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಇಡೀ ದಿನ ಉಪವಾಸ ಸತ್ಯಾಗ್ರಹ ಮಾಡಿದರು.
ಏನೆಲ್ಲ ಹೇಳಿದರು ಮಾಜಿ ಮಿನಿಸ್ಟರ್?
ಧರಣಿ ನಡೆಸಿದ ಕಾಂಗ್ರೆಸಿಗರು
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಉಪವಾಸ ಸತ್ಯಾಗ್ರಹ (Sathyagraha) ನಡೆಸಿದರು. ಕೆಲವರು ಅವರೊಂದಿಗೆ ಉಪವಾಸ ನಡೆಸಿದರು. ಇನ್ನು ಹಲವು ಮುಖಂಡರು, ಕಾರ್ಯಕರ್ತರು ಗಾಂಧಿ ಪಾರ್ಕ್ನಲ್ಲಿ ಸಂಜೆವರೆಗೆ ಧರಣಿ ನಡೆಸಿದರು. ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ಶಾಸಕಿ ಶಾರದಾ ಪೂರ್ಯಾನಾಯ್ಕ್ಗೆ ವಿಧಾನಸಭೆಯಲ್ಲಿ ಮಹತ್ವದ ಜವಾಬ್ದಾರಿ ವಹಿಸಿದ ಜೆಡಿಎಸ್
ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಪ್ರಮುಖರಾದ ಆರ್.ಎಂ. ಮಂಜುನಾಥ್ ಗೌಡ, ಆರ್. ಪ್ರಸನ್ನಕುಮಾರ್, ಎನ್. ರಮೇಶ್, ಎಸ್.ಪಿ. ದಿನೇಶ್, ವಿಜಯಕುಮಾರ್, ಹೆಚ್.ಸಿ. ಯೋಗೇಶ್, ಚಂದ್ರಭೂಪಾಲ್, ವಿಜಯ್, ಕಲೀಂ ಪಾಷಾ, ಇಸ್ಮಾಯಿಲ್ ಖಾನ್, ವಿನೋದ್ಕುಮಾರ್, ಕಲಗೋಡು ರತ್ನಾಕರ್, ಹೆಚ್.ಪಿ.ಗಿರೀಶ್, ಕೆ. ದೇವೇಂದ್ರಪ್ಪ, ವಿನಯ್ ತಾಂಡ್ಲೆ, ಬಾಲಾಜಿ ಶೆಟ್ಟಿ, ವಿಶ್ವನಾಥಕಾಶಿ, ಮಧುಸೂದನ್, ಚೇತನ್, ಸುವರ್ಣ ನಾಗರಾಜ್, ನಾಗರಾಜ್, ಮಂಜುನಾಥ್ ಪುರಲೆ, ಆರೀಫ್, ಯಮುನಾ ರಂಗೇಗೌಡ, ಕವಿತಾ ರಾಘವೇಂದ್ರ, ವೇದಾ ವಿಜಯಕುಮಾರ್ ಮತ್ತಿತರರಿದ್ದರು.
ಇದನ್ನೂ ಓದಿ – ಶಿವಮೊಗ್ಗ ಶಾಸಕರ ಕಚೇರಿಯಲ್ಲೇ ಸಭೆ ಮಧ್ಯೆ ವ್ಯಕ್ತಿ ಮೇಲೆ ಹಲ್ಲೆ