SHIVAMOGGA LIVE NEWS | 24 JANUARY 2024
THIRTHAHALLI : ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳದ ವತಿಯಿಂದ ಆಯೋಜಿಸಿದ್ದ ಸಂಪೂರ್ಣ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನದಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಭಾಗವಹಿಸಿದ್ದರು. ತೀರ್ಥಹಳ್ಳಿ ತಾಲೂಕು ಕೋಣಂದೂರಿನ ಹಾಲವನಹಳ್ಳಿಯಲ್ಲಿ ರವೀಂದ್ರ ಅವರು ಯಕ್ಷಗಾನ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿದ್ದರು.
ಮಾಜಿ ಸಚಿವ ಬಿ.ಶ್ರೀರಾಮುಲು ಅವರು ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಪ್ರೆಸ್ಟೀಜ್ ಶೋ ರೂಂ ಮಾಲೀಕ ವಿಜಯೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದೊಡ್ಡ ಸಂಖ್ಯೆಯ ಜನರು ಯಕ್ಷಗಾನ ವೀಕ್ಷಿಸಿದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಹೆಡೆ ಎತ್ತಿದ ನಾಗರ ಹಾವು