SHIVAMOGGA LIVE NEWS | 25 APRIL 2024
GAJANURU : ಪಕ್ಷದ ಮುಖಂಡರು ತಮ್ಮನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಗಾಜನೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು. ಗಾಜನೂರಿನ ಗ್ರಂಥಾಲಯ ಸಮೀಪ ಗಾಜನೂರು ನಾಗರಾಜ್, ಶಿವಕುಮಾರ್ ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಇದೇ ವೇಳೆ ಮಾತನಾಡಿದ ಗಾಜನೂರು ನಾಗರಾಜ್, ವಿಧಾನಸಭೆ ಚುನಾವಣೆ ಸಂದರ್ಭ ಮನೆ ಮನೆಗೆ ತೆರಳಿ ಗ್ಯಾರಂಟಿ ಕಾರ್ಡ್ ಹಂಚಿದ್ದೆವು. ಈಗಲು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಹಾಗಿದ್ದೂ, ಕಳೆದ ಒಂದು ತಿಂಗಳಿಂದ ಪಕ್ಷದ ಬ್ಲಾಕ್ ಕಾಂಗ್ರೆಸ್ ಮುಖಂಡರು ತಮ್ಮನ್ನು ಕಡೆಗಣಿಸಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಪಕ್ಷದ ಮೇಲೆ ಪರಿಣಾಮ ಉಂಟಾಗಲಿದೆ ಎಂದು ಎಚ್ಚರಿಸಿದರು.
ಇದನ್ನೂ ಓದಿ – SHIMOGA JOBS | ಪ್ರತಿಷ್ಠಿತ ಶೋ ರೂಂನ ಶಿವಮೊಗ್ಗ, ಶಿರಸಿ ಬ್ರ್ಯಾಂಚ್ನಲ್ಲಿ ಕೆಲಸ ಖಾಲಿ ಇದೆ