SHIVAMOGGA LIVE NEWS | 21 DECEMBER 2022
ಶಿವಮೊಗ್ಗ : ಗಮಕ ಗಂಧರ್ವ (gamaka expert), ಪದ್ಮಶ್ರೀ ಪುರಸ್ಕೃತ ಹೊಸಹಳ್ಳಿ ಹೆಚ್.ಆರ್.ಕೇಶವಮೂರ್ತಿ (89) ಅವರು ನಿಧನರಾಗಿದ್ದಾರೆ.
2022ರಲ್ಲಿ ಕೇಂದ್ರ ಸರ್ಕಾರ ಹೆಚ್.ಆರ್.ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪಶ್ರಸ್ತಿ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇದಕ್ಕೆ ಸಾಕ್ಷಿಯಾಗಿದ್ದರು.
(gamaka expert)
ಗೊತ್ತಿರಲೇಬೇಕಾದ 4 ವಿಚಾರಗಳು
1 ಹೆಚ್.ಆರ್.ಕೇಶವಮೂರ್ತಿ ಅವರು ಶಿವಮೊಗ್ಗದ ಮತ್ತೂರು ಹೊಸಹಳ್ಳಿಯ ರಾಮಸ್ವಾಮಿ ಶಾಸ್ತ್ರಿ–ಲಕ್ಷ್ಮೀದೇವಮ್ಮ ದಂಪತಿ ಪುತ್ರ. 22 ಫೆಬ್ರವರಿ 1934ರಲ್ಲಿ ಜನಿಸಿದ್ದ ಅವರು ಬಾಲ್ಯದಿಂದಲೇ ಗಮಕ ಕಲೆ ಕರಗತ ಮಾಡಿಕೊಂಡಿದ್ದರು. 16ನೇ ವಯಸ್ಸಿನಲ್ಲೇ ಗ್ರಾಮದ ವೆಂಕಟೇಶಯ್ಯ ಅವರ ಬಳಿ ಗಮಕ ವಾಚನ ಅಧ್ಯಯನ ಆರಂಭಿಸಿದ್ದರು. ರಾಮಾಯಣ, ಮಹಾಭಾರತ, ಕನ್ನಡ ಹಾಗೂ ಸಂಸ್ಕೃತದ ಕಾವ್ಯಗಳನ್ನು ಹಲವು ರಾಗಗಳಲ್ಲಿ ವಾಚನ ಮಾಡುವುದನ್ನು ರೂಢಿಸಿಕೊಂಡರು.ALSO READ – ಮೈಸೂರು, ಬೆಂಗಳೂರು, ಹುಬ್ಬಳ್ಳಿ ಮಾದರಿ ಶಿವಮೊಗ್ಗದಲ್ಲಿಯು ಕ್ಷೇಮ ಕೇಂದ್ರಕ್ಕೆ ಮನವಿ, ಏನಿದು ಕೇಂದ್ರ?