ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021
ಗಾಂಜಾ ಸೇವನೆ ಮಾಡಿ ಖಾಸಗಿ ಬಸ್ ನಿಲ್ದಾಣ ಬಳಿ ಕುಳಿತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿ, ಪ್ರಕರಣ ದಾಖಲು ಮಾಡಿದ್ದಾರೆ.
ಶ್ರೀಧರ್ (19) ಎಂಬಾತನನ್ನು ಬಂಧಿಸಲಾಗಿದೆ. ದೊಡ್ಡಪೇಟೆ ಠಾಣೆ ಪಿಎಸ್ಐ ಸತೀಶ್ ನಾಯ್ಕ್, ಸಿಬ್ಬಂದಿ ಲಚ್ಚಾನಾಯ್ಕ ಅವರು ಗಸ್ತು ತಿರುಗುತ್ತಿದ್ದಾಗ ಬಸ್ ನಿಲ್ದಾಣದ ಬಳಿ ಯುವಕನೊಬ್ಬ ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದನ್ನು ಗಮನಿಸಿದ್ದಾರೆ.
ವಿಚಾರಣೆ ಮಾಡಿದಾಗ ಆತ ಗಾಂಜಾ ಸೇವನೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಯುವಕನನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದ್ದಾರೆ. ಆಗ ಗಾಂಜಾ ಸೇವನೆ ಮಾಡಿರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀಧರನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Eedu dadda vishayava yelli hudukidaru avare siguvudu