ಶಿವಮೊಗ್ಗ ಲೈವ್.ಕಾಂ | SHIKARIPURA NEWS | 17 MARCH 2021
ಗಾಂಜಾ ಸಾಗಣೆ ಕುರಿತು ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ರಸ್ತೆಯಲ್ಲಿ ತಪಾಸಣೆ ನಡೆಸಿದಾಗ ಬೈಕ್ನಲ್ಲಿ ಒಣ ಗಾಂಜಾ ಸಾಗಿಸುತ್ತಿದ್ದವರು ಸಿಕ್ಕಿಬಿದ್ದಿದ್ದಾರೆ. ಗಾಂಜಾ, ವಾಹನ ಸಹಿತ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ರಜಾಕ್ ಮತ್ತು ಖಲೀದ್ ಎಂಬುವವರನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಶಿಕಾರಿಪುರದ ಈಸೂರು – ಗಾಮ ರಸ್ತೆಯಲ್ಲಿ ತಪಾಸಣೆ ನಡೆಸುವಾಗ, 580 ಗ್ರಾಮ್ ಒಣ ಗಾಂಜಾದ ಜೊತೆಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಶಿವಮೊಗ್ಗ ಅಬಕಾರಿ ಉಪ ಆಯುಕ್ತ ಕ್ಯಾ. ಅಜಿತ್ ಕುಮಾರ್ ಮಾರ್ಗದರ್ಶನದಲ್ಲಿ ಸಾಗರ ಉಪ ಅಧೀಕ್ಷಕರ ನೇತೃತ್ವದಲ್ಲಿ ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]