SHIVAMOGGA LIVE NEWS | 15 APRIL 2024
ELECTION NEWS : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಎರಡನೇ ಬಾರಿ ನಾಮಪತ್ರ ಸಲ್ಲಿಸಿದರು. ಬೆಳಗ್ಗೆ ನಾಮಪತ್ರ ಸಲ್ಲಿಸಿದ್ದ ಗೀತಾ ಶಿವರಾಜ್ ಕುಮಾರ್, ಮಧ್ಯಾಹ್ನದ ವೇಳೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಿವಮೊಗ್ಗಕ್ಕೆ ಆಗಮಿಸಿದ ಹಿನ್ನೆಲೆ, ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಎರಡನೇ ಬಾರಿ ನಾಮಪತ್ರ ಸಲ್ಲಿಕೆ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಿ.ಕೆ.ಸಂಗಮೇಶ್ವರ, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಇದ್ದರು.
ಇದನ್ನೂ ಓದಿ –ಗಾಂಧಿ ಬಜಾರ್ನಲ್ಲಿ ಕಾಂಗ್ರೆಸ್ ಮೆರವಣಿಗೆ ವೇಳೆ ಬಿದ್ದ ಎಲ್ಇಡಿ ಪರದೆ, ಪತ್ರಕರ್ತ ಸೇರಿ ಮೂವರಿಗೆ ಗಾಯ