ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ನವೆಂಬರ್ 2021
ಶ್ರೀ ಕ್ಷೇತ್ರ ಕೂಡಲಿಯಲ್ಲಿ ಇವತ್ತು ಗೂ ಪೂಜೆ ಮತ್ತು ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣ ಕಾರ್ಯಕ್ರಮದ ನೇರ ಪ್ರದರ್ಶನ ಆಯೋಜಿಸಲಾಗಿತ್ತು.
ತಾಲೂಕು ಆಡಳಿತ, ಪುರಾತತ್ವ ಇಲಾಖೆ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಕಾರ್ಯಕ್ರಮ ನಡೆಯಿತು. ದೀಪಾವಳಿ ಹಬ್ಬದ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಗೋವುಗಳಿಗೆ ಪೂಜೆ ಸಲ್ಲಿಸಲಾಯಿತು.
ಮೋದಿ ಕಾರ್ಯಕ್ರಮದ ಲೈವ್
ಉತ್ತರಾಖಂಡದ ಕೇದಾರನಾಥದಲ್ಲಿ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣ ಮಾಡಿದರು. ಕೂಡಲಿಯ ಶ್ರೀ ರಾಮೇಶ್ವರ ದೇವಾಲಯದಲ್ಲಿ ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಯಿತು.
ದೇಗುಲದ ಆಡಳಿತ ಮಂಡಳಿ, ಅಧಿಕಾರಿಗಳು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.