ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MARCH 2021
ವಿಶೇಷ ಉಪನ್ಯಾಸ ನೀಡಲು ಶಿವಮೊಗ್ಗಕ್ಕೆ ಆಗಮಿಸಿದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಎನ್ಎಸ್ಯುಐ ಕಾರ್ಯಕರ್ತರು ಗೋ ಬ್ಯಾಕ್ ಚಳವಳಿ ನಡೆಸಿದರು.
ನೆಹರೂ ಸ್ಟೇಡಿಯಂನಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಹಿನ್ನೆಲೆಯಲ್ಲಿ ನೆಹರೂ ಸ್ಟೇಡಿಯಂ ಬಳಿ ಎನ್ಎಸ್ಯುಐ ಕಾರ್ಯಕರ್ತರು ‘ಗೋ ಬ್ಯಾಕ್ ಸೂಲಿಬೆಲೆ’ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಿದರು.
ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮತ್ತೊಂದೆಡೆ ಚಕ್ರವರ್ತಿ ಸೂಲಿಬೆಲೆ ಅವರು ಹಲವು ಸುಳ್ಳುಗಳನ್ನು ಹೇಳಿ, ಯುವ ಸಮೂಹ ಮತ್ತು ಜನರ ದಿಕ್ಕು ತಪ್ಪಿಸಿದ್ದಾರೆ. ಆದ್ದರಿಂದ ಅವರ ಭಾಷಣಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.
ನೆಹರೂ ಸ್ಟೇಡಿಯಂಗೆ ಮುತ್ತಿಗೆ ಹಾಕಲು ಯತ್ನಿಸಿದ ಎನ್ಎಸ್ಯುಐ ಕಾರ್ಯಕರ್ತರನ್ನು ಪೊಲೀಸರು ತಡೆದರು.
ಎಸ್ಎಸ್ಯುಐ ಮುಖಂಡರಾ ಚೇತನ್ ಗೌಡ, ಬಾಲಾಜಿ ಸೇರಿದಂತೆ ಹಲವರು ಈ ವೇಳೆ ಇದ್ದರು.