SHIVAMOGGA LIVE NEWS
ಶಿವಮೊಗ್ಗ | ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್’ನಲ್ಲಿದ್ದ ಚಿನ್ನದ (GOLD) ನೆಕ್ಲೇಸ್ ಕಳ್ಳತನ ಮಾಡಲಾಗಿದೆ. ಕೆ.ಎಸ್.ಆರ್.ಟಿ.ಸಿ ಬಸ್’ನಲ್ಲಿ ಕೃತ್ಯ ನಡೆದಿದೆ.
ಹರಿಹರದ ಜ್ಯೋತಿ ಕಲಾ ಎಂಬುವವರಿಗೆ ಸೇರಿದ 47 ಗ್ರಾಂನ 1.80 ಲಕ್ಷ ರೂ. ಮೌಲ್ಯದ ನೆಕ್ಲೇಸ್ ಕಳ್ಳತನವಾಗಿದೆ.
ಹೇಗಾಯ್ತು ಘಟನೆ?
ಚಿಕ್ಕಮಗಳೂರಿನಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಜ್ಯೋತಿ ಕಲಾ ಅವರು ಶಿವಮೊಗ್ಗಕ್ಕೆ ಬಂದಿದ್ದರು. KSRTC ಬಸ್’ನಲ್ಲಿ ಬಂದು ಶಿವಮೊಗ್ಗ ನಿಲ್ದಾಣದಲ್ಲಿ ಇಳಿದಿದ್ದರು. ಶಿವಮೊಗ್ಗದಲ್ಲಿರುವ ಅಣ್ಣನ ಮನೆಗೆ ಹೋಗಲು ನಿರ್ಧರಿಸಿ, ಸ್ವೀಟ್ ಖರೀದಿಸಲು ಬೇಕರಿಗೆ ಹೋಗಿದ್ದರು.
ಸ್ವೀಟ್ ಖರೀದಿಸಿ ಹಣ ನೀಡಲು ವ್ಯಾನಿಟಿ ಬ್ಯಾಗ್ ತೆಗೆದಾಗ ನೆಕ್ಲೇಸ್ ನಾಪತ್ತೆಯಾಗಿತ್ತು. ತಾವು ಬಂದಿದ್ದ ಬಸ್ ಬಳಿ ಕೂಡಲೆ ಹೋಗಿ ನೋಡಿದ್ದಾರೆ. ಅಷ್ಟು ಹೊತ್ತಿಗಾಗಲೇ ಬಸ್ ಅಲ್ಲಿಂದ ತೆರಳಿತ್ತು.
ಚಿಕ್ಕಮಗಳೂರು – ಶಿವಮೊಗ್ಗ ಮಾರ್ಗ ಮಧ್ಯೆ KSRTC ಬಸ್ಸಿನಲ್ಲಿ ಯಾರೋ ತಮ್ಮ ಬ್ಯಾಗ್ ಕಳ್ಳತನ ಮಾಡಿದ್ದಾರೆ ಎಂದು ಜ್ಯೋತಿ ಕಲಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಬೈಕ್, ಕಾರು ಡಿಕ್ಕಿ, ಶಾಲೆ ಹೆಡ್ ಮಾಸ್ಟರ್ ಸ್ಥಳದಲ್ಲೇ ಸಾವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.