ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 MAY 2023
SHIMOGA : ಚಿನ್ನ, ಬೆಳ್ಳಿ ವ್ಯಾಪಾರಿಯೊಬ್ಬರು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾರೆ. ಡೆತ್ ನೋಟ್ (Death Note) ಪತ್ತೆಯಾಗಿದ್ದು ಅದರಲ್ಲಿ ಇಬ್ಬರ ಹೆಸರು ಬರೆದಿಟ್ಟಿದ್ದಾರೆ ಎಂದು ವ್ಯಾಪಾರಿಯ ಪತ್ನಿ ದೂರಿನಲ್ಲಿ ಆರೋಪಿಸಿದ್ದಾರೆ.
ಸಿದ್ದಯ್ಯ ರಸ್ತೆಯ ಕೃಷ್ಣ ಕುಮಾರ್ ಕುರ್ಡೇಕರ್ (38) ಎಂಬುವವರು ತಮ್ಮ ಮನೆಯ ಬಾತ್ ರೂಂನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ ಕುಮಾರ್ ಕುರ್ಡೇಕರ್ ಅವರು ಚಿನ್ನ ಬೆಳ್ಳಿ ಕೆಲಸ ಮಾಡುತ್ತಿದ್ದರು. ಮೂರು ತಿಂಗಳಿಂದ ಕೃಷ್ಣ ಕುಮಾರ್ ಅವರಿಗೆ ಇಬ್ಬರು ವ್ಯಕ್ತಿಗಳು ತುಂಬಾ ಮಾನಸಿಕ ಹಿಂಸೆ ನೀಡುತ್ತಿದ್ದರು. ಮಾನಹಾನಿಯಿಂದ ಮನನೊಂದಿದ್ದರು ಎಂದು ಆರೋಪಿಸಲಾಗಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಇದೆ ಕಾರಣಕ್ಕೆ ಮನನೊಂದು ಪತ್ರ (Death Note) ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ರದಲ್ಲಿ ಪ್ರಶಾಂತ್ ಮೋರೆ ಮತ್ತು ಗಣೇಶ್ ಎಂಬುವವರು ಕಾರಣ ಎಂದು ಕೃಷ್ಣಕುಮಾರ್ ಅವರ ಪತ್ನಿ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಸಹ್ಯಾದ್ರಿ ಕಾಲೇಜು ಸುತ್ತಮುತ್ತ 24 ಗಂಟೆ ನಿಷೇಧಾಜ್ಞೆ, ಮೈಕ್, ಬ್ಯಾರಿಕೇಡ್ ವ್ಯವಸ್ಥೆ, ಕಾರಣವೇನು?
ಶಿವಮೊಗ್ಗ ಲೈವ್.ಕಾಂ