ನಾಗರಿಕ ಅಭಿನಂದನೆ, ಅಹ್ವಾನ ಪತ್ರಿಕೆ ಬಿಡುಗಡೆ
ಸಾಗರ : ಊರನ್ನು ಸದೃಢವಾಗಿ ನಿರ್ಮಿಸುವಲ್ಲಿ ಶ್ರಮ ವಹಿಸಿರುವ ವ್ಯಕ್ತಿಗಳನ್ನು ಗುರುತಿಸಿ ಗೌರವಿಸುವುದು ಸಮಾಜದ ಆದ್ಯ ಕರ್ತವ್ಯ ಎಂದು ಸಾಹಿತಿ ನಾ.ಡಿಸೋಜಾ ತಿಳಿಸಿದರು. ಇಲ್ಲಿನ ಶೃಂಗೇರಿ ಶಂಕರ ಮಠದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಸಹಕಾರಿ ಧುರೀಣ ಎಂ.ಹರನಾಥರಾವ್ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು. ನಾಗರಿಕ ಅಭಿನಂದನಾ ಸಮಿತಿಯು ಫೆ. 4 ರಂದು ಬೆಳಿಗ್ಗೆ 10ಕ್ಕೆ ಗಾಂಧಿ ಮೈದಾನದಲ್ಲಿ ಸಮಾರಂಭ ಏರ್ಪಡಿಸಿದೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.