‘ಕಳೆದ ಕಾಲ, ನಡೆದ ದೂರ’ ಬಿಡುಗಡೆ
ಶಿವಮೊಗ್ಗ : ಸಿಟಿಜನ್ಸ್ ಫೋರಂ, ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಜಿಲ್ಲಾ ಸೊಸೈಟಿ, ಪೀಪಲ್ಸ್ ಲಾಯರ್ಸ್ ಗಿಲ್ಡ್ ಸಹಯೋಗದಲ್ಲಿ ಇಲ್ಲಿನ ವಕೀಲರ ಭವನದಲ್ಲಿ ಭಾನುವಾರ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಅವರ ‘ಕಳೆದ ಕಾಲ, ನಡೆದ ದೂರ’ ಕೃತಿಯನ್ನು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಬಿಡುಗಡೆ ಮಾಡಿದರು. ಯುವ ಜನತೆ ಉದ್ಯೋಗ ಪಡೆದ ನಂತರ ಓದುವ ಹವ್ಯಾಸ ಮರೆತಿದ್ದಾರೆ. ಜೀವನದ ಯಶಸ್ಸಿಗೆ ಓದು ಬಹಳ ಮುಖ್ಯ. ಆದ್ದರಿಂದ ಓದುವ ಅಭ್ಯಾಸ ರೂಢಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.