ಸಿರಿಧಾನ್ಯಗಳು ಪೋಷಕಾಂಶಗಳ ಸಿರಿಸಂಪತ್ತು
ಶಿಕಾರಿಪುರ : ಸಿರಿಧಾನ್ಯಗಳು ಪೋಷಕಾಂಶಗಳ ಸಿರಿಸಂಪತ್ತು. ಅವುಗಳನ್ನು ಬೆಳೆಯಲು ರೈತರು ಆದ್ಯತೆ ನೀಡಬೇಕು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಆರ್.ಸಿ. ಜಗದೀಶ್ ಸಲಹೆ ನೀಡಿದರು. ಚುರ್ಚಿಗುಂಡಿ ಗ್ರಾಮದಲ್ಲಿ ರೈತರಲ್ಲಿ ಸಿರಿಧಾನ್ಯಗಳ ಮಹತ್ವದ ಅರಿವು ಮೂಡಿಸಲು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಇರುವಕ್ಕಿ, ಕೃಷಿ ನಿರ್ದೇಶನಾಲಯ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿ, ಭಾರತೀಯ ಸಿರಿಧಾನ್ಯಗಳ ಸಂಶೋಧನಾ ಸಂಸ್ಥೆ ಹೈದರಾಬಾದ್ ಹಾಗೂ ಸಂಗಮೇಶ್ವರ ರೈತ ಉತ್ಪಾದಕರ ಸಹಕಾರ ಸಂಘ ಚುರ್ಚಿಗುಂಡಿ ಆಶ್ರಯದಲ್ಲಿ ನಡೆದ ಸಿರಿಧಾನ್ಯಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.