ರೈತರು ಋಣಮುಕ್ತರಾಗಲು ಅವಕಾಶ
ಶಿವಮೊಗ್ಗ : ಪ್ಯಾಕ್ಸ್, ಲ್ಯಾಂಪ್ಸ್, ಡಿಸಿಸಿ ಹಾಗೂ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗಳಿಂದ ಕೃಷಿ ಸಾಲ ಪಡೆದು ಸುಸ್ತಿದಾರರಾದ ರೈತರು ಋಣಮುಕ್ತರಾಗಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ಪಡೆದು 2023ನೇ ಡಿಸೆಂಬರ್ 31ಕ್ಕೆ ಸುಸ್ತಿಯಾಗಿರುವ ರೈತರಿಗೆ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.