ಶಿವಮೊಗ್ಗ ಹೆಚ್ಚುವರಿ ರಕ್ಷಣಾಧಿಕಾರಿಗೆ ರಾಷ್ಟ್ರಪತಿ ಪದಕ
ಶಿವಮೊಗ್ಗ : ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಪ್ರಶಂಸನೀಯ ಸೇವೆಗಾಗಿ 2024ನೇ ಸಾಲಿನ ಗಣರಾಜ್ಯೋತ್ಸವ ನಿಮಿತ್ತ ನೀಡಲಾಗುವ ರಾಷ್ಟ್ರಪತಿಗಳ ಪೊಲೀಸ್ ಶ್ಲಾಘನೀಯ ಸೇವಾ ಪದಕಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಆಯ್ಕೆಯಾಗಿದ್ದಾರೆ. 1994ರಲ್ಲಿ ಪೊಲೀಸ್ ಉಪ ನಿರೀಕ್ಷಕರಾಗಿ ಸೇವೆಗೆ ಸೇರಿದ್ದರು. ಪೊಲೀಸ್ ನಿರೀಕ್ಷಕರಾಗಿ, ಉಪಾಧೀಕ್ಷಕರಾಗಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.