SHIVAMOGGA LIVE NEWS | 5 DECEMBER 2022
ಶಿವಮೊಗ್ಗ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ರಾಜ್ಯಪಾಲರನ್ನು (governor visit) ಸ್ವಾಗತಿಸಿದರು.
ಕಾರವಾರದಲ್ಲಿ ನೌಕ ಸೇನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಜ್ಯಪಾಲರು (governor visit) ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಶಿವಮೊಗ್ಗದಲ್ಲಿ ವಿಶ್ರಾಂತಿ ಪಡೆದರು. ಈ ವೇಳೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಅವರೊಂದಿಗೆ ಚರ್ಚೆ ನಡೆಸಿದರು.
ALSO READ – ಜೋಗ ಜಲಪಾತ, ತ್ಯಾವರೆಕೊಪ್ಪದ ಹುಲಿ, ಸಿಂಹಧಾಮಕ್ಕೆ ರಾಜ್ಯಪಾಲರ ಭೇಟಿ, ಅಧಿಕಾರಿಗಳ ಜೊತೆ ಸಫಾರಿ, ಫೋಟೊ ಸೆಷನ್
ಬಳಿಕ ಶಿವಮೊಗ್ಗ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಿದರು.
ALSO READ – ರಾಜ್ಯಪಾಲರನ್ನು ಮೆಚ್ಚಿಸಲು ಡ್ಯಾಂನಿಂದ ನೀರು ಬಿಟ್ಟರು, ಗೆಹ್ಲೋಟ್ ಜೋಗದಿಂದ ಮರಳಿದ ಬಳಿಕ ಜಲಪಾತಕ್ಕೆ ನೀರು ಬಂತು