ಶಿವಮೊಗ್ಗ ಲೈವ್.ಕಾಂ | SHIMOGA NEWS | 02 FEBRUARY 2021
ಕನಿಷ್ಠ ಕೂಲಿ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಜಿಲ್ಲಾ ಪಂಚಾಯಿತಿ ಸಿ.ಇ.ಒ. ಅವರಿಗೆ ಮನವಿ ಸಲ್ಲಿಸಲಾಯಿತು.
ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗಾರ, ಜವಾನ, ನೀರುಘಂಟಿ, ಜಾಡುಮಾಲಿ ಹಾಗೂ ಇನ್ನಿತರ ನೌಕರರು ಹಲವು ವರ್ಷಗಳಿಂದ ಕೆಲಸ ಮಾಡುತ್ತಾ ಬಂದಿದ್ದಾರೆ. ಆದರೆ ಇವರಿಗೆ ಕನಿಷ್ಠ ವೇತನ ಬಡ್ತಿ ಇಲ್ಲವಾಗಿದೆ ಈ ಬಗ್ಗೆ ಹಲವು ಬಾರಿ ಪ್ರತಿಭಟನೆ, ಹೋರಾಟ ನಡೆಸಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಕಾರರು ತಿಳಿಸಿದರು.
ಪ್ರತಿಭಟನಾಕಾರರ ಬೇಡಿಕೆ ಏನು?
21 ಸಾವಿರ ಕನಿಷ್ಠ ಕೂಲಿ ನೀಡಬೇಕು 15ನೇ ಹಣಕಾಸು ಯೋಜನೆಯಡಿಯಲ್ಲಿ ವೇತನಕ್ಕಾಗಿ ಹಣ ಕಾಯ್ದಿರಿಸಿಕೊಳ್ಳಬೇಕು.
ಜಿಲ್ಲಾ ಪಂಚಾಯಿತಿಗಳಲ್ಲಿ ಹೊಸ ನೇಮಕಾತಿ ಮಾಡಿಕೊಳ್ಳಬೇಕು. ಪದೋನ್ನತಿ ನೀಡಬೇಕು. ಸೇವಾ ಪುಸ್ತಕ ಇಡಬೇಕು. ವಿದ್ಯಾರ್ಹತೆಗೆ ಅನುಗುಣವಾಗಿ ಪಂಚಾಯಿತಿ ಸಿಬ್ಬಂದಿಗಳಲ್ಲೂ ನೇಮಕ ಮಾಡಿಕೊಳ್ಳಬೇಕು. ಎಲ್ಲಾ ನೌಕರರನ್ನು ಇ.ಎಫ್.ಎಂ.ಎಸ್.ಗೆ ಸೇರ್ಪಡೆ ಮಾಡಿಕೊಳ್ಳಬೇಕು.
ಸುರಕ್ಷತಾ ಸಾಧನ ನೀಡಬೇಕು. ಡಾಟಾ ಎಂಟ್ರಿ ಆಪರೇಟರ್ಗಳಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ಎಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಬಂಗಾರಪ್ಪ, ಉಮೇಶ್, ಪ್ರಶಾಂತ್, ನಾರಾಯಣ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]