ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಸೆಪ್ಟಂಬರ್ 2020
ಸೇವೆ ಖಾಯಂಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಅತಿಥಿ ಉಪನ್ಯಾಸಕರ ನಡೆಸುತ್ತಿರುವ ಪ್ರತಿಭಟನೆ ಒಂಭತ್ತನೆ ವಾರಕ್ಕೆ ಕಾಲಿಟ್ಟಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು, ಬೇಡಿಕೆ ಈಡೇರದಿದ್ದರೆ ಬೆಂಗಳೂರು ಚಲೋ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಸೇವೆ ಖಾಯಂಗೊಳಿಸಬೇಕು, ಲಾಕ್ ಡೌನ್ ಅವಧಿಯನ್ನು ಸೇವಾವಧಿ ಎಂದು ಪರಿಗಣಿಸಬೇಕು, ಕೂಡಲೆ ವೇತನ ಬಿಡುಗಡೆ ಮಾಡಬೇಕು, ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕರಿಗೆ ಪರಿಹಾರ ನೀಡಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿ ಮಂಗಳವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಾರವು ಪ್ರತಿಭಟನೆ ಮುಂದುವರೆದಿದೆ. ರೈತ ಸಂಘ, ದಲಿತ ಸಂಘರ್ಷ ಸಮಿತಿ, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸೇರಿದಂತೆ ಹಲವು ಸಂಘಟನೆಗಳು ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಸೋಮಶೇಖರ್, ರೈತ ಮುಖಂಡ ಕೆ.ಟಿ.ಗಂಗಾಧರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]