SHIVAMOGGA LIVE NEWS | THIRTHALLI| 14 ಜೂನ್ 2022
ಪಠ್ಯಪುಸ್ತಕ ಸಮಿತಿಯ ಪರಿಷ್ಕರಣೆ ದೋಷ ವಿರೋಧಿಸಿ ಜೂ.15ರಂದು ಕುಪ್ಪಳಿಯಿಂದ ಆರಂಭವಾಗಲಿರುವ ಸಾಂಸ್ಕೃತಿಕ ಸೌಹಾರ್ದ ನಡಿಗೆಗೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಲಿದ್ದಾರೆ. PROTEST
ಕುಪ್ಪಳಿಯಿಂದ ತೀರ್ಥಹಳ್ಳಿವೆರೆಗೆ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆಯಲ್ಲಿ ಸಾಹಿತಿಗಳಾದ ದೇವನೂರು ಮಹಾದೇವ್, ಬರಗೂರು ರಾಮಚಂದ್ರಪ್ಪ, ಕುಂ.ವೀರಭದ್ರಪ್ಪ, ಪ್ರೊ. ಎಸ್.ಜಿ. ಸಿದ್ದರಾಮಯ್ಯ, ಡಾ. ಕಾಳೇಗೌಡ ನಾಗವಾರ, ಡಾ.ಹಿ.ಶಿ.ರಾಮಚಂದ್ರೇ ಗೌಡ, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮಾಜಿ ಸ್ಪೀಕರ್ ರಮೇಶ ಕುಮಾರ್ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.
ವಿಷ ಬೀಜ ಬಿತ್ತುವ ಹುನ್ನಾರ
ತೀರ್ಥಹಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರಕವಿ ಕುವೆಂಪು ವಿಶ್ವ ಮಾನವ ವೇದಿಕೆ ಸಂಚಾಲಕ ಕಡಿದಾಳ್ ದಯಾನಂದ್ ಅವರು, ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿಧಾರ್ಮಿಕ ವಿಷಬೀಜ ಬಿತ್ತುವ ಹುನ್ನಾರ ನಡೆಯುತ್ತಿದೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ರೂಢಿಸುವುದು ಪ್ರತಿ ನಾಗರಿಕ ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.
ಪಠ್ಯ ಪರಿಷ್ಕರಣೆ ಹೆಸರಲ್ಲಿ ಪಠ್ಯ ಪುಸ್ತಕ ರಚನಾ ಸಮಿತಿ ನಿರ್ವಹಿಸಿದ ಪಾತ್ರ ತುಂಬಾ ಕೆಟ್ಟದಾಗಿದೆ. ಗಣ್ಯರ ಪಾಠದ ಇತಿಹಾಸ ತಿರುಚುವ, ನಾಡಗೀತೆಗೆ ಅವಮಾನ ಮಾಡುವ ಹಿಂದೆ ದುರುದ್ದೇಶ ಇದೆ ಎಂದು ಆರೋಪಿಸಿದರು.
ಪಠ್ಯಪುಸ್ತಕ ಸಮಿತಿಯ ಪರಿಷ್ಕರಣೆ ದೋಷ ವಿರೋಧಿಸಿ ಮಾಜಿ ಕಿಮ್ಮನೆರತ್ನಾಕರ್ ನೇತೃತ್ವದಲ್ಲಿ ಜೂ. 15ರಂದು ಕುಪ್ಪಳಿಯಿಂದ ಹೊರಡುವ ‘ಸಾಂಸ್ಕೃತಿಕ ಸೌಹಾರ್ದ ನಡಿಗೆ’ ಹೋರಾಟಕ್ಕೆ ಅನೇಕ ಸಂಘ ಸಂಸ್ಥೆ ಗಳು, ಸಾಹಿತಿಗಳು, ಹೋರಾಟಗಾರರು, ಎಲ್ಲವರ್ಗದ ಜನರು ಬೆಂಬಲ ನೀಡಿದ್ದಾರೆ. ವೇದಿಕೆ ಪಾದಯಾತ್ರೆಯ ಪೂರ್ಣ ಜವಾಬ್ದಾರಿ ಹೊತ್ತಿದೆ ಎಂದರು. PROTEST
ಮಲೆನಾಡು ಸಂಘರ್ಷ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ನೆಂಪೆ ದೇವರಾಜ್ ಮಾತನಾಡಿ, ವಿರೋಧ ಎಂಬುದು ಕೇವಲ ಕಾಟಚಾರಕ್ಕಲ್ಲ. ಕುಪ್ಪಳಿಯಿಂದ ಆರಂಭವಾದ ಹೋರಾಟ ಗೆಲುವು ಸಾಧಿಸುವವರೆಗೂ ನಡೆಯುತ್ತದೆ ಎಂದು ಹೇಳಿದರು.
ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಕರವೇ, ಜಯಕರ್ನಾಟಕ ಸಂಘಟನೆ, ಸಹಕಾರ ಕ್ಷೇತ್ರದ ವಿವಿಧ ಸಂಘಟನೆಗಳ ಬೆಂಬಲ ಇದೆ. ಅನೇಕ ಸಂಘಟನೆಗಳ ಬೆಂಬಲವನ್ನು ಕೋರಲಾಗಿದೆ. ಸಂಗೀತ ನಿರ್ದೇಶಕ ಹಂಸಲೇಖ ಸೌಹಾರ್ದ ನಡಿಗೆ ಉದ್ಘಾಟಿಸಲಿದ್ದಾರೆ ಎಂದು ದೇವರಾಜ್ ಹೇಳಿದರು.
ಜಿಲ್ಲಾ ಕಸಾಪ ಅಧ್ಯಕ್ಷ ಡಿ. ಮಂಜುನಾಥ್, ಕೆಪಿಸಿಸಿ ಸದಸ್ಯ ಜಿ.ಎಸ್. ನಾರಾಯಣರಾವ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಡಿ.ಎಸ್.ವಿಶ್ವನಾಥಶೆಟ್ಟಿ, ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟೇಶ ಹೆಗ್ಡೆ, ತಾಲೂಕು ಕಸಾಪ ಅಧ್ಯಕ್ಷ ಟಿ.ಕೆ.ರಮೇಶಶೆಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ – ಮತ್ತೆ ಪ್ರತ್ಯಕ್ಷವಾಯ್ತು ಕಾಡಾನೆ, ಗ್ರಾಮಸ್ಥರಲ್ಲಿ ಢವಢವ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.