ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟೆಂಬರ್ 2021
ಭದ್ರಾವತಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅಪ್ಪಾಜಿ ಅವರನ್ನು ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ಇದನ್ನೂ ಓದಿ | ಭದ್ರಾವತಿಯ ಗೋಣಿಬೀಡಿನ ಶಕ್ತಿಧಾಮದಲ್ಲಿ ಅಪ್ಪಾಜಿಗೌಡರ ಅಮೃತ ಶಿಲೆಯ ಪ್ರತಿಮೆ ಅನಾವರಣ
ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಶಕ್ತಿಧಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಅಪ್ಪಾಜಿಗೌಡ ಅವರ ಬೆಂಬಲಿಗರು, ಭದ್ರಾವತಿ ಕ್ಷೇತ್ರದ ಜನರ ಧ್ವನಿಗೆ ನಾನು ಬೆಲೆ ಕೊಡುತ್ತೇನೆ. ಹಾಗಾಗಿ ಶಾರದಾ ಅಪ್ಪಾಜಿಗೌಡ ಅವರನ್ನು ಮುಂದಿನ ಅಭ್ಯರ್ಥಿಯಾಗಿ ಮಾಡುತ್ತೇನೆ ಎಂದರು.
ಬೆಂಗಳೂರಿನಲ್ಲಿ ಎಲ್ಲಾ ವಿಚಾರ ಚರ್ಚೆ
ಮೊದಲ ಹಂತದಲ್ಲಿ 140 ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಕಾರ್ಯಾಗಾರ ಮಾಡುತ್ತಿದ್ದೇವೆ. ಸೆಪ್ಟಂಬರ್ 27ರಂದು ಕಾರ್ಯಾಗಾರ ನಡೆಯಲಿದೆ. ಅಲ್ಲಿ ಮತ್ತಷ್ಟು ವಿಚಾರಗಳನ್ನು ಚರ್ಚೆ ಮಾಡಲಿದ್ದೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200