ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಭೇಟಿಯಾಗಿ, ಆರೋಗ್ಯ ವಿಚಾರಿಸಿದರು.
ಅಪಘಾತದಲ್ಲಿ ಗಾಯಗೊಂಡಿರುವ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರು, ಬೆಂಗಳೂರಿನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನಡೆಯುತ್ತಿದೆ.
ಇದನ್ನೂ ಓದಿ | ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಇವತ್ತು ಆಸ್ಪತ್ರೆಗೆ ಭೇಟಿ ನೀಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದ್ದಾರೆ. ಬಹುಬೇಗ ಆರೋಗ್ಯ ಸುಧಾರಿಸಲಿ ಎಂದು ಪ್ರಾರ್ಥಿಸಿದ್ದಾರೆ. ಈ ವೇಳೆ ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ಇದ್ದರು.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು, ಬೆಂಗಳೂರಿನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಮೊಗ್ಗ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕಿ, ಸೋದರಿ ಶಾರದಾ ಪೂರ್ಯಾ ನಾಯಕ್ ಅವರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದೆ. ಅವರ ಆರೋಗ್ಯ ಬೇಗ ಸುಧಾರಿಸಲಿ. ಜನಸೇವೆ ಮಾಡಲು ದೇವರು ಅವರಿಗೆ ಚೈತನ್ಯ ತುಂಬಲಿ ಎಂದು ಈ ಮೂಲಕ ಹಾರೈಸುತ್ತೇನೆ. pic.twitter.com/cgiHtFkEF5
— H D Kumaraswamy (@hd_kumaraswamy) July 12, 2021
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200