ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 SEPTEMBER 2023
SHIMOGA : ಹಿಂದೂ ಮಹಾಸಭಾ ಗಣಪತಿ (Hindu Mahasabha Ganapati) ಮೆರವಣಿಗೆಯಲ್ಲಿ ಭಾಗವಹಿಸಿರುವ ಜನರಿಗೆ ಊಟ (food), ಪಾನೀಯ ವ್ಯವಸ್ಥೆ ಮಾಡಲಾಗಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಜನರು ಪಾಲ್ಗೊಂಡಿದ್ದಾರೆ. ಈ ಹಿನ್ನೆಲೆ ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಮುಖಂಡರು ಊಟ, ತಿಂಡಿ, ಪಾನೀಯ ವ್ಯವಸ್ಥೆ ಮಾಡಿದಾರೆ. ಎಸ್ಪಿಎಂ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಬಿ.ಹೆಚ್.ರಸ್ತೆಯಲ್ಲಿ ಊಟ, ತಿಂಡಿ, ನೀರು, ಮಜ್ಜಿಗೆಯ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ- ಸಕ್ರೆಬೈಲು ಆನೆ ಬಿಡಾರದಲ್ಲಿ ಸ್ವಚ್ಚತಾ ಹಿ ಸೇವಾ ಅಭಿಯಾನ
ಸಂಘ ಸಂಸ್ಥೆಗಳ ಪ್ರತಿನಿಧಿಗಳೆ ಊಟ, ತಿಂಡಿಯನ್ನು ಜನರಿಗೆ ಬಡಿಸುತ್ತಿದ್ದಾರೆ. ಪುಳಿಯೊಗರೆ, ಮೊಸರನ್ನ, ಉಪ್ಪಿಟ್ಟು ಸೇರಿದಂತೆ ವಿವಿಧ ತಿಂಡಿ ವಿತರಣೆ ಮಾಡಲಾಗುತ್ತಿದೆ. ಇತ್ತ ಅಲ್ಲಲ್ಲಿ ಜ್ಯೂಸ್, ಮಜ್ಜಿಗೆ, ನೀರು ವಿತರಣೆ ಕಾರ್ಯವು ಬಿರುಸಾಗಿದೆ.
ಶಿವಮೊಗ್ಗ ಲೈವ್.ಕಾಂ