ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 25 NOVEMBER 2020
ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದು, ನಿಲ್ಲಿಸದೆ ಪರಾರಿಯಾಗಿದೆ. ಘಟನೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ.
ಗಂಟೆಹಕ್ಕಲು ಗ್ರಾಮದ ನಿವಾಸಿ ಶಾರದಾ ರಮೇಶ್, ಮೃತ ದುರ್ದೈವಿ. ಹಾಲು ಕೊಡಲು ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಆಗುಂಬೆ ಕಡೆಗೆ ತೆರಳುತ್ತಿದ್ದ ಓಮಿನಿ ಕಾರೊಂದು ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಗಂಟೆಹಕ್ಕಲು ಸಮೀಪ ರಾಷ್ಟ್ರೀಯ ಹೆದ್ದಾರಿ 169ಎರಲ್ಲಿ ಘಟನೆ ಸಂಭವಿಸಿದೆ.
ಅಪಘಾತ ಆಗುತ್ತಿದ್ದಂತೆ ಕೂಡಲೆ ಶಾರದಾ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]