ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 APRIL 2021
ಕಲ್ಲಿನಿಂದ ಜಜ್ಜಿ ವ್ಯಕ್ತಿಯೊಬ್ಬರ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಮೃತನ ಸಂಬಂಧಿಯೊಬ್ಬನನ್ನು ಬಂಧಿಸಿದ್ದಾರೆ. ಹಣಕಾಸು ವಿಚಾರವಾಗಿ ಶುರುವಾಗದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ.
ಭದ್ರಾವತಿ ತಾಲೂಕು ಡಣಾಯಕಪುರದಲ್ಲಿ ಬಸಪ್ಪ (54) ಎಂಬುವವರ ಹತ್ಯೆ ಮಾಡಲಾಗಿತ್ತು. ಏಪ್ರಿಲ್ 12ರಂದು ರಾತ್ರಿ ಘಟನೆ ಸಂಭವಿಸಿತ್ತು. ಬಸಪ್ಪ ಅವರ ತಲೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿತ್ತು.
ಈ ಸಂಬಂಧ ತನಿಖೆ ನಡೆಸಿದ ಹೊಳೆಹೊನ್ನೂರು ಠಾಣೆ ಪೊಲೀಸರು, ಡಣಾಯಕಪುರದ ಚೌಡಪ್ಪ (27) ಎಂಬಾತನನ್ನು ಬಂಧಿಸಿದ್ದಾರೆ. ಹಣಕಾಸು ವಿಚಾರವಾಗಿ ಜಗಳವಾಗಿದ್ದು, ಈ ಸಂಬಂಧ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]